Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:4 - ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರಿಶೋಧಿಸಲಿ; ಆಗ ಅವನು ತನ್ನ ನಿವಿುತ್ತದಿಂದ ಹೆಚ್ಚಳಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬರ ನಿವಿುತ್ತದಿಂದಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳ್ಯಾನಿ ತೆಂಚ್ಯಾ ತೆಂಚ್ಯಾ ಕಾಮಾಚಿ ಪರಿಕ್ಷಾ ಕರುನ್ ಬಗುಚೆ, ತನ್ನಾ ತೆನಿ ಅಪ್ನಾಚೆ ಮೊಟೆಪಾನ್ ಬೊಲುಕ್ ಹೊತಾ, ತೆ ಬಿ ಅನಿ ಎಕ್ಲ್ಯಾಚ್ಯಾ ವಾಂಗ್ಡಾ ಅಪ್ನಾಕುಚ್ ಸಮಾ ಕರುನ್ ಘೆಯ್ನಸ್ತಾನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:4
17 ತಿಳಿವುಗಳ ಹೋಲಿಕೆ  

ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.


ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.


ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.


ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು.


ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು