Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:14 - ಪರಿಶುದ್ದ ಬೈಬಲ್‌

14 ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:14
31 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಆದರೆ ಕಿವಿಗೊಟ್ಟು ಕೇಳಿಸಿಕೊ, ದೂತರು ಹೊರಗೆ ಅಳುತ್ತಿದ್ದಾರೆ. ಸಮಾಧಾನದ ಸಮಾಚಾರವನ್ನು ತರುವವರು ಗಟ್ಟಿಯಾಗಿ ರೋಧಿಸುತ್ತಿದ್ದಾರೆ.


ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.


ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’


ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಕುರುಬರ ಕೂಗಾಟ ನನಗೆ ಕೇಳುತ್ತಿದೆ. ಕುರಿಗಳ ಗೋಳಾಟ ನನಗೆ ಕೇಳಿಬರುತ್ತಿದೆ. ಯೆಹೋವನು ಅವರ ದೇಶವನ್ನು ನಾಶಮಾಡುತ್ತಿದ್ದಾನೆ.


ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.


ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.


ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು