Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:16 - ಪರಿಶುದ್ದ ಬೈಬಲ್‌

16 ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:16
17 ತಿಳಿವುಗಳ ಹೋಲಿಕೆ  

ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು