ಚೆಫನ್ಯ 1:17 - ಪರಿಶುದ್ದ ಬೈಬಲ್17 ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.