Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:4 - ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:4
14 ತಿಳಿವುಗಳ ಹೋಲಿಕೆ  

ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ನಿನ್ನ ವಿಗ್ರಹಗಳನ್ನೂ ಕಲ್ಲುಕಂಬಗಳನ್ನೂ ಒಡೆದು ನಾಶಮಾಡುವೆನು. ನಿನ್ನ ಕೈಗಳು ಮಾಡಿದ ವಸ್ತುಗಳನ್ನು ನೀನು ಪೂಜಿಸುವುದಿಲ್ಲ.


ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು!


ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.


ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು