ಚೆಫನ್ಯ 1:5 - ಪರಿಶುದ್ದ ಬೈಬಲ್5 ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ ಅಧ್ಯಾಯವನ್ನು ನೋಡಿ |
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.