Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:9 - ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:9
11 ತಿಳಿವುಗಳ ಹೋಲಿಕೆ  

ಆದಕಾರಣವೇ ಇಂದಿಗೂ ಸಹ ಅಷ್ಡೋದಿನಲ್ಲಿ ದಾಗೋನನ ಗುಡಿಯನ್ನು ಪ್ರವೇಶಿಸುವ ಯಾಜಕರಾಗಲಿ ಇಲ್ಲವೆ ಇತರೆ ಜನರಾಗಲಿ ಹೊಸ್ತಿಲನ್ನು ತುಳಿಯುವುದಿಲ್ಲ.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ಆ ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಿಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು.


ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.


ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.


“ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು