Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:11 - ಪರಿಶುದ್ದ ಬೈಬಲ್‌

11 ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:11
36 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.


ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.


ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆಬೇರೆ ನಗರದ ಜನರು ಜೆರುಸಲೇಮಿಗೆ ಬರುವರು.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.


“ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಎಲ್ಲಾ ವಿಗ್ರಹಗಳು ಇಲ್ಲವಾಗುವವು.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು