Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:7 - ಪರಿಶುದ್ದ ಬೈಬಲ್‌

7 ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:7
42 ತಿಳಿವುಗಳ ಹೋಲಿಕೆ  

ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.


ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು.


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ.


ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.


ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.


ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


“ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.


ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.


ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?


ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.


ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”


ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು