Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:11 - ಪರಿಶುದ್ದ ಬೈಬಲ್‌

11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:11
29 ತಿಳಿವುಗಳ ಹೋಲಿಕೆ  

ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ಆ ಜನರು ತಗ್ಗಿಸಲ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು