Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:15 - ಪರಿಶುದ್ದ ಬೈಬಲ್‌

15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:15
48 ತಿಳಿವುಗಳ ಹೋಲಿಕೆ  

ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.


ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.


ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.


“ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ. ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.”


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.


ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


“ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು