Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:20 - ಪರಿಶುದ್ದ ಬೈಬಲ್‌

20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:20
32 ತಿಳಿವುಗಳ ಹೋಲಿಕೆ  

ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


“ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


“ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.


ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸ್ವದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.


ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು