Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:4 - ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:4
55 ತಿಳಿವುಗಳ ಹೋಲಿಕೆ  

ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಬಂದು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವರ ಮರಣಕ್ಕೆ ಅವರೇ ಕಾರಣರಾಗುವರು.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಸರ್ವಶಕ್ತನಾದ ಯೆಹೋವನು ಹೀಗೆಂದನು: “ನೀವು ನನ್ನ ಸಂದೇಶಗಳನ್ನು ಕೇಳಿ ಅದರಂತೆ ನಡೆಯಲಿಲ್ಲ.


“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.


ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು