Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:5 - ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರು ದಾಟಿಹೋದರು. ಆ ಪ್ರವಾದಿಗಳು ನಿತ್ಯಕಾಲಕ್ಕೂ ಜೀವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪಿತೃಗಳು ಎಲ್ಲಿ? ಪ್ರವಾದಿಗಳು ನಿತ್ಯಜೀವಿಗಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:5
16 ತಿಳಿವುಗಳ ಹೋಲಿಕೆ  

ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.


“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.


ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು