Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:6 - ಪರಿಶುದ್ದ ಬೈಬಲ್‌

6 ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:6
39 ತಿಳಿವುಗಳ ಹೋಲಿಕೆ  

ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”


ಆದರೆ ಈಗ ಹಾಗಿಲ್ಲ. ಅಳಿಯದೆ ಉಳಿದವರಿಗೆ ಹಾಗೆ ಆಗುವದಿಲ್ಲ. ಇದು ಸರ್ವಶಕ್ತನಾದ ಯೆಹೋವನ ನುಡಿ.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.


ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.


ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.


ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.


ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು