Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:9 - ಪರಿಶುದ್ದ ಬೈಬಲ್‌

9 ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:9
24 ತಿಳಿವುಗಳ ಹೋಲಿಕೆ  

ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.


ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.


ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.


“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು