Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:1 - ಪರಿಶುದ್ದ ಬೈಬಲ್‌

1 ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:1
14 ತಿಳಿವುಗಳ ಹೋಲಿಕೆ  

“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”


ಬೆಟ್ಟಗಳ ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟಿರಿ. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”


ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು