Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:12 - ಪರಿಶುದ್ದ ಬೈಬಲ್‌

12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:12
16 ತಿಳಿವುಗಳ ಹೋಲಿಕೆ  

“ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.


ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು.


ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.”


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.


ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಬೆಳ್ಳಿಯನ್ನು ತೂಕಹಾಕಿದೆನು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇಪ್ಪತ್ತರಿಂದ ಅರವತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಮೂವತ್ತು ಶೆಕೆಲ್‌ಗಳಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು