Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:3 - ಪರಿಶುದ್ದ ಬೈಬಲ್‌

3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:3
34 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.


ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


“‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು