Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:6 - ಪರಿಶುದ್ದ ಬೈಬಲ್‌

6 ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 (ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:6
37 ತಿಳಿವುಗಳ ಹೋಲಿಕೆ  

ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”


ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.


ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.


ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.


ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.


ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.


ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”


ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.


ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”


ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.


ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು