Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:7 - ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:7
76 ತಿಳಿವುಗಳ ಹೋಲಿಕೆ  

ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಆಗ ಯೇಸುವಿನ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


“ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ನನ್ನ ತಂದೆಗೆ ಇರುವುದೆಲ್ಲಾ ನನ್ನದೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಅದೇ ರೀತಿ ಈ ಚಿಕ್ಕ ಮಕ್ಕಳಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳಬಾರದೆಂಬುದೇ ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಾಗಿದೆ.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು.


ಅಂತ್ಯವು ಬರುವುದು. ಅದು ಬೇಗನೆ ಬರುವದು.


ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು