Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:11 - ಪರಿಶುದ್ದ ಬೈಬಲ್‌

11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:11
21 ತಿಳಿವುಗಳ ಹೋಲಿಕೆ  

ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.


ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.


“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು