Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:16 - ಪರಿಶುದ್ದ ಬೈಬಲ್‌

16 ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:16
42 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಆ ಮರದ ಕೊಂಬೆಗಳು ಸಹ ಪವಿತ್ರವಾಗಿವೆ.


ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ.


ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’


ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.


“ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.


ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು