Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:2 - ಪರಿಶುದ್ದ ಬೈಬಲ್‌

2 ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:2
30 ತಿಳಿವುಗಳ ಹೋಲಿಕೆ  

ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


“ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.


ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.


ಜನಾಂಗದವರಿಗೆ ಇದನ್ನು ಪ್ರಕಟಿಸು: ಯುದ್ಧಕ್ಕೆ ತಯಾರಾಗಿರಿ! ಶೂರರನ್ನು ಎಚ್ಚರಿಸಿರಿ! ಯುದ್ಧ ವೀರರು ಹತ್ತಿರಕ್ಕೆ ಬರಲಿ; ಅವರು ಬರಲಿ!


“ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ ಜನಾಂಗಗಳನ್ನು ನಾನು ನಾಶಮಾಡುವೆನು.


ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು