Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:6 - ಪರಿಶುದ್ದ ಬೈಬಲ್‌

6-7 ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:6
24 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ. ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:


ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.


ನಿನ್ನ ಮೇಲೆ ಆಕಾಶದಲ್ಲಿ ಹೊಳೆಯುವ ಜ್ಯೋತಿಗಳನ್ನು ಮಂಕುಗೊಳಿಸುವೆನು; ನಿನ್ನ ದೇಶದಲ್ಲಿ ಕತ್ತಲನ್ನು ಬರಮಾಡುವೆನು” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.


ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು