ಜೆಕರ್ಯ 2:9 - ಪರಿಶುದ್ದ ಬೈಬಲ್9 ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”