Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:1 - ಪರಿಶುದ್ದ ಬೈಬಲ್‌

1 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:1
36 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


“ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)


ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.


ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.


“ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.


ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.


ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.


ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


“ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.


ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು