Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:4 - ಪರಿಶುದ್ದ ಬೈಬಲ್‌

4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:4
34 ತಿಳಿವುಗಳ ಹೋಲಿಕೆ  

“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”


ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು!


ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.


“ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು,


ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು