Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:10 - ಪರಿಶುದ್ದ ಬೈಬಲ್‌

10 ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:10
26 ತಿಳಿವುಗಳ ಹೋಲಿಕೆ  

ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.


ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.


ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”


ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.


ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು.


ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು