Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:7 - ಪರಿಶುದ್ದ ಬೈಬಲ್‌

7 ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:7
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


“ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.


ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”


‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’


ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.


ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಸಕಲ ದ್ವೀಪಗಳೂ ಅದೃಶ್ಯವಾದವು ಮತ್ತು ಬೆಟ್ಟಗಳೇ ಇಲ್ಲವಾದವು.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಎಂಬ ವಚನದ ಅರ್ಥವೇನು?


ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ನನಗೆ ಯೆಹೋವನ ಸಂದೇಶವೂ ಸಹ ಹೀಗೆ ಹೇಳಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು