Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:8 - ಪರಿಶುದ್ದ ಬೈಬಲ್‌

8 ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೂತ್ರಧಾರಿಯಾದ ದೂತನು: “ಇವಳೇ ಪಾಪದ ಪ್ರತೀಕ,” ಎಂದು ಹೇಳಿ, ಅವಳನ್ನು ಕೊಳಗದೊಳಗೆ ಅದುಮಿ, ಭಾರವಾದ ಆ ಸೀಸದ ಮುಚ್ಚಳವನ್ನು ತಟ್ಟನೆ ಕೊಳಗದ ಬಾಯಿಗಿಟ್ಟು ಮುಚ್ಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:8
11 ತಿಳಿವುಗಳ ಹೋಲಿಕೆ  

ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!


ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು.


ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. ನಾನು ಅವರನ್ನು ಕ್ಷಮಿಸಬೇಕೋ?


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


“ಯಾಕೋಬನು ಒಬ್ಬ ವ್ಯಾಪಾರಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು