Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:7 - ಪರಿಶುದ್ದ ಬೈಬಲ್‌

7 ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:7
8 ತಿಳಿವುಗಳ ಹೋಲಿಕೆ  

ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.


“ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.


ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು