Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:8 - ಪರಿಶುದ್ದ ಬೈಬಲ್‌

8 ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:8
15 ತಿಳಿವುಗಳ ಹೋಲಿಕೆ  

ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.


“ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.


ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ಸಂಸೋನನು ಫಿಲಿಷ್ಟಿಯರಿಗೆ, “ನೀವು ನನಗೆ ಈ ದುಷ್ಕೃತ್ಯವನ್ನು ಮಾಡಿರುವುದರಿಂದ ನಾನೂ ನಿಮಗೆ ಕೇಡನ್ನು ಮಾಡುತ್ತೇನೆ” ಎಂದು ಹೇಳಿ,


ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು