ಜೆಕರ್ಯ 7:12 - ಪರಿಶುದ್ದ ಬೈಬಲ್12 ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿ |
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.