Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:2 - ಪರಿಶುದ್ದ ಬೈಬಲ್‌

2 ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:2
11 ತಿಳಿವುಗಳ ಹೋಲಿಕೆ  

ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, ‘ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.


“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.


ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ.


ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.


ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.


ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು