Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:10 - ಪರಿಶುದ್ದ ಬೈಬಲ್‌

10 ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:10
11 ತಿಳಿವುಗಳ ಹೋಲಿಕೆ  

ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.


“‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು