Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:14 - ಪರಿಶುದ್ದ ಬೈಬಲ್‌

14 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:14
12 ತಿಳಿವುಗಳ ಹೋಲಿಕೆ  

“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.


ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.


ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು