Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:22 - ಪರಿಶುದ್ದ ಬೈಬಲ್‌

22 ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಬಹು ದೇಶಗಳವರೂ ಬಲವಾದ ಜನಾಂಗಗಳವರೂ ಯೆರೂಸಲೇವಿುನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:22
18 ತಿಳಿವುಗಳ ಹೋಲಿಕೆ  

ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, ‘ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.


ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.


ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.


ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು