Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:7 - ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನೂ ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:7
21 ತಿಳಿವುಗಳ ಹೋಲಿಕೆ  

“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


“ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು