Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:8 - ಪರಿಶುದ್ದ ಬೈಬಲ್‌

8 ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:8
30 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”


ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’”


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.


ನೀವು ನನ್ನ ಜನರಾಗುವಿರಿ ಮತ್ತು ನಾನು ನಿಮ್ಮ ದೇವರಾಗುವೆನು.”


ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”


ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು