Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:1 - ಪರಿಶುದ್ದ ಬೈಬಲ್‌

1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:1
22 ತಿಳಿವುಗಳ ಹೋಲಿಕೆ  

ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.


ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು