Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:3 - ಪರಿಶುದ್ದ ಬೈಬಲ್‌

3 ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:3
16 ತಿಳಿವುಗಳ ಹೋಲಿಕೆ  

ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ.


ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ


ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು.


ಅಲ್ಲಿಂದ ಆ ಸೀಮೆಯು ದಕ್ಷಿಣದಿಕ್ಕಿಗೆ ಹಿಂತಿರುಗಿ ರಾಮಾವನ್ನು ತಲುಪಿ, ಅಲ್ಲಿಂದ ಸುಭದ್ರ ನಗರವಾದ ತೂರ್‌ಗೆ ಮುಂದುವರೆದು ಅಲ್ಲಿಂದ ತಿರುಗಿಕೊಂಡು ಹೋಸಾಕ್ಕೆ ತಲುಪುತ್ತದೆ. ಅಲ್ಲಿಂದ ಅಕ್ಜೀಬ್,


ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು?


ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.


ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.


ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!


ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.


ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.


ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.


ನಿನ್ನ ಎಲ್ಲಾ ಐಶ್ವರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು