Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:11 - ಪರಿಶುದ್ದ ಬೈಬಲ್‌

11 ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು - ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವದಕ್ಕೆ ಕಾದಿರೋಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:11
19 ತಿಳಿವುಗಳ ಹೋಲಿಕೆ  

ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.


ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.


ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು