Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:12 - ಪರಿಶುದ್ದ ಬೈಬಲ್‌

12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ ನಾವೂ ಇವರನ್ನು ಜೀವದೊಡನೆ ನುಂಗಿಬಿಡುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:12
15 ತಿಳಿವುಗಳ ಹೋಲಿಕೆ  

ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.


ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.


“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.”


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.


ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ.


ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.


ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.


ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು