Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:25 - ಪರಿಶುದ್ದ ಬೈಬಲ್‌

25 ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:25
13 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.


“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.


ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.


ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.


ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ


ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.


ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.


ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”


ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು