Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:4 - ಪರಿಶುದ್ದ ಬೈಬಲ್‌

4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:4
19 ತಿಳಿವುಗಳ ಹೋಲಿಕೆ  

ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


“ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.


ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು