Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:17 - ಪರಿಶುದ್ದ ಬೈಬಲ್‌

17 ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:17
22 ತಿಳಿವುಗಳ ಹೋಲಿಕೆ  

ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ


ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.


ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.


ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.


ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.


ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು