Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:2 - ಪರಿಶುದ್ದ ಬೈಬಲ್‌

2 ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:2
15 ತಿಳಿವುಗಳ ಹೋಲಿಕೆ  

ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.


ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು