Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:22 - ಪರಿಶುದ್ದ ಬೈಬಲ್‌

22 ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:22
31 ತಿಳಿವುಗಳ ಹೋಲಿಕೆ  

ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.


ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.


ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.


ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.


ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.


ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಅವನ ಐಶ್ವರ್ಯವು ಹೆಚ್ಚುತ್ತಾ ಬಂದದ್ದರಿಂದ ಅವನು ಬಹು ಐಶ್ವರ್ಯವಂತನಾದನು.


ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.


“ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.


ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.


ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.


ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.


ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.


ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.


ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.


ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು