Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:25 - ಪರಿಶುದ್ದ ಬೈಬಲ್‌

25 ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:25
20 ತಿಳಿವುಗಳ ಹೋಲಿಕೆ  

ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.


ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೋ ಸಮಾಧಾನದಿಂದಿರುವರು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ದುರ್ಜನರು ಸರ್ವನಾಶವಾಗುವರು; ಆದರೆ ಸಜ್ಜನರ ಕುಟುಂಬವು ಸ್ಥಿರವಾಗಿರುವುದು.


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು